ಆರೋಗ್ಯರಾಜ್ಯಸಿನಿಮಾ

ಅಪ್ಪು ಸ್ಮರಣಾರ್ಥ ಪ್ರಕಾಶ್ ರೈ ಫೌಂಡೇಶನ್ ನಿಂದ ಆ್ಯಂಬುಲೆನ್ಸ್ ಕೊಡುಗೆ: 32 ಜಿಲ್ಲೆಗಳಲ್ಲಿ ಓಡಾಡಲಿದೆ ‘ಪುನೀತ್ ಎಕ್ಸ್‌ಪ್ರೆಸ್‌’

ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಬಿಟ್ಟು ಅಗಲಿದ್ದಾರೆ. ಆದ್ರೂ ಅಪ್ಪು ಎಲ್ರ ಮನಸಲ್ಲಿ ಗಟ್ಟಿಯಾಗಿ ನೆಲೆ ನಿಂತಿದ್ದಾರೆ. ಇದೀಗ ಪ್ರಕಾಶ್ ರೈ ಫೌಂಡೇಶನ್ ಅಪ್ಪು ಅವರ ಸ್ಮರಣಾರ್ಥ ಹೊಸ ಸಮಾಜ ಸೇವೆಗೆ ಮುಂದಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಅಪ್ಪು ಎಕ್ಸ್​ಪ್ರೆಸ್ ಆ್ಯಂಬುಲನ್ಸ್ ನೀಡಲಾಗುತ್ತಿದೆ.

ಅಪ್ಪು ಹೆಸರಲ್ಲಿ ಪ್ರಕಾಶ್ ರಾಜ್ ಫೌಂಡೇಷನ್​ ವತಿಯಿಂದ ಈ ಹೊಸ ಹೆಜ್ಜೆ ಇರಿಸಲಾಗಿದ್ದು,. ಶೀಘ್ರದಲ್ಲೇ ಮೈಸೂರಲ್ಲಿ ಬ್ಲಡ್ ಬ್ಯಾಂಕ್ ಕೂಡ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಮೈಸೂರಿನ ಮಿಷನ್ ಹಾಸ್ಪಿಟಲ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮೊದಲ ಆಂಬುಲೆನ್ಸ್ ನೀಡಲಾಯ್ತು. ಪುನೀತ್‌ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಪ್ಪು ಹೆಸರಿನಲ್ಲಿ ಉಚಿತ ಆ್ಯಂಬುಲೆನ್ಸ್ ನೀಡುವ ಕಾರ್ಯವನ್ನು ಪ್ರಕಾಶ್ ರೈ ಫೌಂಡೇಶನ್ ಹಮ್ಮಿಕೊಂಡಿದೆ. ಈ ಕೆಲಸಕ್ಕೆ ಪುನೀತ್ ರಾಜಕುಮಾರ್ ಅವರ ಮಾನವೀಯತೆಯ ಕೆಲಸವೇ ಸ್ಫೂರ್ತಿಯಾಗಿದೆ ಎಂದು ಪ್ರಕಾಶ್ ರೈ ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತಾಡಿದ ನಟ ಪ್ರಕಾಶ್ ರಾಜ್ , ಅಪ್ಪು ಜತೆಗಿನ ಒಡನಾಟ ಸ್ಮರಿಸಿಕೊಂಡ್ರು. ಆ್ಯಂಬುಲೆನ್ಸ್​ ಸಕಾಲಕ್ಕೆ ಸಿಕ್ಕಿದ್ದರೆ ಅಪ್ಪು ಬದುಕುತ್ತಿದ್ದರೇನೋ ಎಂಬ ಸ್ಥಿತಿ ಜನ ಸಾಮಾನ್ಯರಿಗೆ ಬರಬಾರದು ಎಂಬ ಉದ್ದೇಶದಿಂದ ಪುನೀತ್ ರಾಜ್​ಕುಮಾರ ಹೆಸರಿನಲ್ಲಿ ಅಪ್ಪು ಎಕ್ಸ್​ಪ್ರೆಸ್ ಎಂಬ ಆ್ಯಂಬುಲೆನ್ಸ್ ಅನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರಕಾಶ್ ರಾಜ್ ಫೌಂಡೇಷನ್ ನೀಡಲಿದೆ ಎಂದು ತಿಳಿಸಿದರು.

ಪುನೀತ್ ಚಿಕ್ಕ ವಯಸ್ಸಿನಲ್ಲಿ ಮಾಡಿದ ಕೆಲಸ ದೊಡ್ಡದು. ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ಆಸೆ ನಮ್ಮದು. ಆ ದೃಷ್ಟಿಯಿಂದ ಅವರು ನಮ್ಮಲ್ಲಿ ಜೀವಂತಾಗಿ ಇರಬೇಕಾದರೆ, ಅವರು ಮಾಡಿರುವ ಒಳ್ಳೆಯ ಕೆಲಸಗಳನ್ನು ಸ್ಮರಿಸುತ್ತಾ ಕೂರದೇ ಅವುಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಆ ದೃಷ್ಟಿಯಿಂದ ಎಲ್ಲ ಜಿಲ್ಲೆಗಳಿಗೂ ಅಪ್ಪು ಎಕ್ಸ್​ಪ್ರೆಸ್ ಆ್ಯಂಬುಲೆನ್ಸ್ ನೀಡಲು ಮುಂದಾಗಿದ್ದೇವೆ ಎಂದು ನಟ ಪ್ರಕಾಶ್ ರಾಜ್ ತಿಳಿಸಿದರು .

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button