
ಆದಿತ್ಯ ಬಿರ್ಲಾ ಗ್ರೂಪ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ಆದಿತ್ಯ ಬಿರ್ಲಾ ಗ್ರೂಪ್ ದೇಶದ ಕಂಪನಿಗಳಲ್ಲಿ ಒಂದಾಗಿದ್ದು, ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ನೆರವಾಗುವ ಉದ್ದೇಶದಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವಿದ್ಯಾರ್ಥಿವೇತನ ನೀಡುತ್ತಿದೆ.
ಈ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 1 ರಿಂದ 12 ನೇ ತರಗತಿ, ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಒಂದು ಬಾರಿಗೆ ರೂ. 60,000 ವರೆಗು ವಿದ್ಯಾರ್ಥಿ ವೇತನ ನೀಡಲಾಗುವುದು. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ.
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿ ಮತ್ತು ಪದವಿ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್ಗಳಲ್ಲಿ ಓದುತ್ತಿರಬೇಕು.
1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ.24,000, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30,000 ಹಾಗೂ ಪದವಿ ಸಾಮಾನ್ಯ ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ. 36,000, ಮತ್ತು ಪದವಿ ವೃತ್ತಿಪರ ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ.60,000 ವಿದ್ಯಾರ್ಥಿವೇತನ ನೀಡಲಾಗುತ್ತದೆ.
‘ಎಸ್ಬಿಐ’ ನಿಂದ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ ಸಿಗಲಿದೆ 15 ಸಾವಿರ ಸ್ಕಾಲರ್ಶಿಪ್
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ.
( ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್)ಪ್ರಸಕ್ತ ವರ್ಷದ ಪ್ರವೇಶ ಪ್ರಮಾಣಪತ್ರ.ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.
ಆದಾಯ ಪ್ರಮಾಣ ಪತ್ರ (ಫಾರ್ಮ್ 16A/ಆದಾಯ ಪ್ರಮಾಣಪತ್ರ/ ಪೇಸ್ಲಿಪ್).ವಿದ್ಯಾರ್ಥಿಗಳ ಇತ್ತೀಚಿನ ಫೋಟೋ ಸಲ್ಲಿಸಬೇಕು.ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಲಿಂಕ್ ಮೇಲೆ ಕ್ಲಿಕ್ ಮಾಡಿ.