ಅಪರಾಧ

ಆಷಾಢ ಮಾಸಕ್ಕೆ ತವರಿಗೆ ಬಂದಿದ್ದ ನವವಧು ಪ್ರೇಮಿ ಜತೆ ಪರಾರಿ: ವಾಪಸ್ ಕರೆದುಕೊಂಡು ಬಂದಿದ್ದಕ್ಕೆ ಆತ್ಮಹತ್ಯೆ!

ಮೈಸೂರು: ಆಷಾಢ ಮಾಸಕ್ಕೆಂದು ಗಂಡನ ಮನೆಯಿಂದ ತವರು ಮನೆಗೆ ಬಂದಿದ್ದ ನವವಧುವೊಬ್ಬಳು ಪ್ರಿಯಕರನೊಂದಿಗೆ ಪರಾರಿಯಾದ ನಂತರ ಆಕೆಯನ್ನು ಪತ್ತೆ ಹಚ್ಚಿದ್ದಕ್ಕಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ವರ್ಷಿತಾ (20) ಮೃತ ನವವಧು. ಈಕೆ ಆಷಾಢ ಮಾಸಕ್ಕಾಗಿ ಗಂಡನ ಮನೆಯಿಂದ ತವರು ಮನೆಗೆ ಬಂದಿದ್ದ ಸಮಯದಲ್ಲಿ ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜೊತೆ ಪರಾರಿಯಾಗಿದ್ದಳು.

ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡಿದ್ದ ಪೊಲೀಸರು ಒಂದು ವಾರದಲ್ಲಿ ಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು. ಪ್ರಿಯಕರನ ಅಗಲಿಕೆಯಿಂದ ಮನನೊಂದ ನವವಧು ವರ್ಷಿತಾ ನೇಣಿಗೆ ಶರಣಾಗಿದ್ದಾಳೆ.ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಮಗಳ ಮನವೊಲಿಸಿ ಚಾಮರಾಜನಗರದ ಅಭಿಷೇಕ್ ಜೊತೆ ಕಳೆದ ಮೇ 8 ರಂದು ಅದ್ದೂರಿಯಾಗಿ ವಿವಾಹ ಮಾಡಿಕೊಡಲಾಗಿತ್ತು. ಆಷಾಢ ಮಾಸದ ಹಿನ್ನಲೆಯಲ್ಲಿ ವರ್ಷಿತಾ ತವರು ಮನೆಯಾಗಿರುವ ಕಾರ್ಯ ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯತಮ ಕಿರಣ್ ಜೊತೆ ಓಡಿ ಹೋಗಿದ್ದಳು.

ವರ್ಷಿತಾ ಕಾಣೆಯಾದ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರೇಮಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳಿ ಬೇರ್ಪಡಿಸಿದ್ದರು.

ನಂತರ ವರ್ಷಿತಾ ಮೈಸೂರಿನಲ್ಲಿದ್ದ ಸಂಬಂಧಿಕರ ಮನೆಗೆ ಬಂದು 3 ದಿನ ಇದ್ದು, ನಂತರ ರಾಂಪುರ ಗ್ರಾಮದಲ್ಲಿರುವ ತಾತನ ಮನೆಗೆ ಬಂದಿದ್ದಳು. ಪ್ರಿಯಕರನ ಅಗಲಿಕೆಯಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂನಲ್ಲಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತಿ ಮನೆಯವರಿಗೆ ಬಿಗ್ ಶಾಕ್..!ವರ್ಷಿತಾಳ ಗಂಡನ ಮನೆಯವರು ಈ ಘಟನೆಯಿಂದ ಶಾಕ್ ಆಗಿದ್ದಾರೆ. 3 ತಿಂಗಳಲ್ಲೇ ಎಲ್ಲಾ ಹೈಡ್ರಾಮಾ ನಡೆದುಹೋಗಿದ್ದು, ದಿಕ್ಕು ತೋಚದೆ ಕಂಗಾಲಾಗಿದ್ದಾರೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button