ರಾಜ್ಯ

ಕನ್ನಡ ಭಾಷೆ ಕಡ್ಡಾಯಕ್ಕೆ ಮಂಡನೆಯಾಯ್ತು ಮಸೂದೆ: ತಪ್ಪು ಮಾಡಿದ್ರೆ ಇರಲಿದೆ ದಂಡ- ಇಲ್ಲಿದೆ ಡಿಟೇಲ್ಸ್​

ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲಾ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕಾಗಿ ಪ್ರತ್ಯೇಕ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಇಂದು ಮಂಡಿಸಲಾಯಿತು. ಇದು ಸದ್ಯ ಮಸೂದೆಯಾಗಿದ್ದು, ಉಭಯ ಸದನಗಳಲ್ಲಿ ಒಪ್ಪಿಗೆಯಾದರೆ ನಂತರ ಇದು ಕಾನೂನು ಆಗಿ ಜಾರಿಗೆ ಬರಲಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆಯಲ್ಲಿರುವ ಮುಖ್ಯಾಂಶಗಳು

– ಉನ್ನತ ತಾಂತ್ರಿಕ/ ವೃತ್ತಿ ಶಿಕ್ಷಣದಲ್ಲಿ, ಕನ್ನಡವನ್ನು ಒಂದು ಭಾಷೆಯನ್ನಾಗಿ ಪರಿಚಯಿಸುವುದು.

– ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದವರಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ಒದಗಿಸುವುದು.

– ರಾಜ್ಯ ಸರ್ಕಾರ, ರಾಜ್ಯದಲ್ಲಿನ ಸ್ಥಳೀಯ ಪ್ರಾಧಿಕಾರಗಳು, ಶಾಸನಬದ್ಧ ಮತ್ತು ಶಾಸನೇತರ ಸಂಸ್ಥೆಗಳು ಮತ್ತು ಸಹಕಾರಿ ಸಂಘಗಳು ಹಾಗೂ ಇತರ ಸಂಘಗಳಲ್ಲಿ ಉದ್ಯೋಗವನ್ನು ಪಡೆಯಲು ಕನ್ನಡ ಭಾಷೆಯನ್ನು ಅತ್ಯವಶ್ಯಕ ಭಾಷೆ ಆಗಿರುವುದು.

– ಅಧೀನ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ, ಬ್ಯಾಂಕುಗಳಲ್ಲಿ ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು ಬಳಸುವುದು.

– ಕನ್ನಡ ಭಾಷೆಯ ವ್ಯಾಪಕ ಬಳಕೆ ಮತ್ತು ಪ್ರಚಾರಕ್ಕಾಗಿ ಸಾಮಾನ್ಯ ಕ್ರಮಗಳನ್ನು ತೆಗೆದುಕೊಳ್ಳುವುದು.

– ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶ ಅಭಿವೃದ್ಧಿಯಲ್ಲಿ ಕನ್ನಡ ಭಾಷೆಯ ಬಳಕೆಗಾಗಿ ಕ್ರಮಗಳನ್ನು ತೆಗೆದುಕೊಳ್ಳುವುದು.

– ರಾಜ್ಯದಲ್ಲಿ ಅಧಿಸೂಚಿಸಿರುವ ಕೈಗಾರಿಕಾ ನೀತಿಯ ಪ್ರಕಾರ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಎಲ್ಲ ಕೈಗಾರಿಕೆಗಳು ಸರ್ಕಾರದಿಂದ ತೆರಿಗೆ ರಿಯಾಯತಿ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳುವ ಹಕ್ಕನ್ನು ನೀಡುವುದು.

-ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ಮೇಲ್ವಿಚಾರಣೆಗೆ ಅಧಿಕಾರ ಉಲ್ಲಂಘನೆಗಾಗಿ ದಂಡವನ್ನು ವಿಧಿಸಲು ಅವಕಾಶವಿದೆ: ಅದರ ಅನ್ವಯ ಮೊದಲನೇ ಸಾರಿ ತಪ್ಪು ಮಾಡಿದ್ರೆ 5 ಸಾವಿರ ರೂ, ಎರಡನೇ ಸಾರಿ ತಪ್ಪು ಮಾಡಿದ್ರೆ 10 ಸಾವಿರ ರೂ., ಮೂರನೇ ಸಾರಿ ತಪ್ಪು ಮಾಡಿದ್ರೆ 20 ಸಾವಿರ ರೂ ದಂಡ ವಿಧಿಸಲಾಗುವುದು.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button