ಅಪರಾಧರಾಜ್ಯರಾಷ್ಟ್ರಿಯ

ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ ವಿದ್ಯುನ್ಮಾನ ಸಾಧನ ಬಳಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು. ಈ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು.

ಇದಲ್ಲದೇ ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ, ಶಿಕ್ಷೆಯನ್ನೂ ಪ್ರಕಟಿಸಬಹುದು. ಈ ಕುರಿತ ಕರ್ನಾಟಕದ ತಿದ್ದುಪಡಿ ಮಸೂದೆ ‘ದ ಕೋಡ್‌ ಆಫ್ ಕ್ರಿಮಿನಲ್‌ ಪ್ರೊಸೀಜರ್‌-2021’(The Code of Criminal Procedure (Amendment) Bill, 2021)ಗೆ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು.

ಇಲ್ಲಿಯವರೆಗೆ ನ್ಯಾಯಾಲಯದ ಕಲಾಪ ನಡೆಯುತ್ತಿರುವ ವೇಳೆಯಲ್ಲಿ ಮಾತ್ರ ಸಾಕ್ಷಿಗಳ ವಿಚಾರಣೆ ನಡೆಸಿ, ಅವರ ಹೇಳಿಕೆ ದಾಖಲಿಸಿಕೊಳ್ಳಬಹುದಾಗಿತ್ತು. ಇದೂ ಸಹ ಆರೋಪಿ ಬಂಧನಕ್ಕೊಳಗಾಗಿದ್ದರೆ ಮಾತ್ರ ಸಾಧ್ಯವಿತ್ತು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button