ಕೆಜಿಎಫ್’ ಚಾಚಾ ಎಂದೇ ಜಗತ್ತಿನಾದ್ಯಂತ ಹೆಸರು ಪಡೆದಿರುವ ನಟ ಹರೀಶ್ ರಾಯ್ ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಒದ್ದಾಡುತ್ತಿದ್ದಾರೆ

ಬೆಂಗಳೂರು: ಬಣ್ಣದ ಬದುಕು ಬೆಳ್ಳಿತೆರೆಯ ಮೇಲೆ ಎಷ್ಟು ಸುಂದರವೋ, ತೆರೆಯ ಹಿಂದೆ ಅಷ್ಟೇ ನೋವುಗಳನ್ನ ಹೊಂದಿರುತ್ತದೆ. ಅದರಲ್ಲೂ ಪೋಷಕ ನಟರು ತಮ್ಮ ನಿಜ ಜೀವನದಲ್ಲಿ ಅನುಭವಿಸುವ ಕಷ್ಟಗಳಿಗೆ ಕೊನೆಯೇ ಇರುವುದಿಲ್ಲ. ಹೀಗೆ ಜಗತ್ತಿನಾದ್ಯಂತ ಖ್ಯಾತಿ ಪಡೆದ ಕನ್ನಡದ ಪೋಷಕ ನಟ ಕ್ಯಾನ್ಸರ್ ಚಿಕಿತ್ಸೆಗೆ ಪರದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ
ಕಣ್ಣೀರಿನ ಕಥೆ
ಖಾಸಗಿ ಸಂದರ್ಶನ ಒಂದರಲ್ಲಿ ಇದೇ ಮೊದಲ ಬಾರಿಗೆ ತಮ್ಮ ಸಂಕಷ್ಟದ ಸ್ಥಿತಿ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ ನಟ ಹರೀಶ್ ರಾಯ್. ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿರುವ ಹರೀಶ್ ರಾಯ್ ಅಲಿಯಾಸ್ ‘ಕೆಜಿಎಫ್’ ಚಾಚಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಹೀಗಾಗಿ ಅವರಿಗೆ ನೆರವಿನ ಅಗತ್ಯತೆ ಇದೆಯಂತೆ. ಸಂಕೋಚ ಸ್ವಭಾವದ ‘ಕೆಜಿಎಫ್’ ಚಾಚಾ ಎಲ್ಲಿಯೂ ತಮ್ಮ ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆ ಬಗ್ಗೆ ಹೇಳಿರಲಿಲ್ಲವಂತೆ. ಆದರೆ ಅನಿವಾರ್ಯವಾಗಿ ತಮ್ಮ ಕಣ್ಣೀರಿನ ಕಥೆ ಬಿಚ್ಚಿಟ್ಟಿದ್ದಾರೆ ಹರೀಶ್ ರಾಯ್. ಥೈರಾಯ್ಡ್ ಕ್ಯಾನ್ಸರ್ ಸರ್ಜರಿ ನಂತರ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಚಿಕಿತ್ಸೆ ಪಡೆಯಲು ಕನ್ನಡದ ಹೆಮ್ಮೆಯ ನಟನಿಗೆ ಕನ್ನಡಿಗರ ಸಹಾಯ ಅಗತ್ಯವಾಗಿದೆ.
ಹರೀಶ್ ರಾಯ್ ಅವರಿಗೆ ಸಹಾಯ ಮಾಡಲು +91 96069-60656 ಸಂಖ್ಯೆ ಮೂಲಕ ಆನ್ಲೈನ್ ಟ್ರಾನ್ಸ್ಫರ್ ಮಾಡಬಹುದು. ಬದುಕಿನ ಉದ್ದಕ್ಕೂ ಬಣ್ಣದ ಲೋಕಕ್ಕಾಗಿ ಸೇವೆ ಸಲ್ಲಿಸಿ, ಬಣ್ಣದ ಲೋಕಕ್ಕಾಗಿಯೇ ಬದುಕಿರುವ ನಟನ ಜೀವನಕ್ಕೆ ನೆರವಾಗಿ ನಿಲ್ಲಬೇಕಿದೆ. ಕಷ್ಟದ ಸಮಯದಲ್ಲಿ ಕನ್ನಡಿಗರು ಕನ್ನಡದ ನಟನ ಬೆಂಬಲಕ್ಕೆ ನಿಂತರೆ ಅದೇ ಪುಣ್ಯದ ಕೆಲಸವಾಗಲಿದೆ.