Weatherರಾಜ್ಯಹವಾಮಾನ

ಕೊಡಗಿನಲ್ಲಿ ರೆಡ್ ಅಲರ್ಟ್: ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತ, ಶನಿವಾರ ಶಾಲೆಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಕಳೆದ 24 ಗಂಟೆಯಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 126 ಮಿ.ಮೀ ಮಳೆ ದಾಖಲಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ನೀರಿನಿಂದ ಜಲಾವೃತವಾಗಿದೆ. ಭಾಗಮಂಡಲ-ನಾಪೋಕ್ಲು ಸಂಪರ್ಕ ಕಲ್ಪಿಸುವ ಸೇತುವೆಯ ಮೇಲೇ ನೀರು ಹರಿಯುತ್ತಿದ್ದು, ವಾಹನ ಮತ್ತು ಜನ ಸಂಚಾರಕ್ಕೆ ತೊಡಕಾಗಿದೆ.

ಇನ್ನು ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 124 ಮಿ.ಮೀ ಮಳೆ ದಾಖಲಾಗಿದ್ದು, ಮದೆನಾಡು, ಕೊಯನಾಡು, ಚೆಂಬು, ಸಂಪಾಜೆ ವ್ಯಾಪ್ತಿಯಲ್ಲೂ ವರುಣಾರ್ಭಟ ಮುಂದುವರಿದಿದೆ.

ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಬ್ರೇಕ್; ಸಾಲುಗಟ್ಟಿ ನಿಂತ ಟ್ಯಾಂಕರ್ ಲಾರಿಗಳು.

ಮದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 125.5 ಮಿ.ಮೀ ಮಳೆ ದಾಖಲಾಗಿದೆ. ಚೆಂಬು ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆ ಹಿನ್ನೆಲೆ ಅಪಾಯದಲ್ಲಿರುವ ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ. ಚೆಂಬು ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಪಶುಪಾಲನಾ ಇಲಾಖೆಯಿಂದ ಹಿಂಡಿ ಮಿಶ್ರಿತ ಆಹಾರ ಪೂರೈಕೆ ಮಾಡಲಾಗುತ್ತಿದೆ.

ಶುಕ್ರವಾರ ಬೆಳಗ್ಗಿನಿಂದ ಮಳೆ ನಿರಂತವಾಗಿ ಸುರಿಯುತ್ತಿದ್ದು ಹವಾಮಾನ ಇಲಾಖೆ ಜಿಲ್ಲೆಯಲ್ಲಿ ನಾಳೆ (ಶನಿವಾರ) ಬೆಳಗ್ಗೆ 8:30ರ ವರೆಗೆ ರೆಡ್ ಅಲರ್ಟ್ ಘೋಷಿಸಿ ಮುನ್ನೆಚ್ಚರಿಕೆ ನೀಡಿದ್ದು ಶನಿವಾರ ಬೆಳಗ್ಗಿನವರೆಗೆ ಕೊಡಗು ಜಿಲ್ಲೆಯಲ್ಲಿ 200 ಮಿ.ಮೀ ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು ಕಡಂಗ-ನಾಪೋಕ್ಲು-ಮಡಿಕೇರಿ ಮುಖ್ಯ ರಸ್ತೆಯ ಕೊಟ್ಟಮುಡಿ ಗ್ರಾಮದ ಮರ್ಕಝ್ ಶಾಲೆಯ ಮುಂಭಾಗದಲ್ಲಿರುವ ರಸ್ತೆಯ ಎರಡು ಬದಿಯಲ್ಲೂ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಕೊಂಚಮಳೆ ಬಂದರೂ ಸಹ ರಸ್ತೆಯಲ್ಲಿ ನೀರು ಇರುವುದರಿಂದ ಸಮೀಪದ ಮರ್ಕಝ್ ಶಾಲೆ ಹಾಗು ಮಹಿಳಾ ಕಾಲೇಜು ಮತ್ತು ಸ್ಥಳೀಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮಳೆಗಾಲದಲ್ಲಿ ನಿರಂತರ ಪರದಾಡುವಂತಾಗಿದೆ.

ಇನ್ನು ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಇರುವುದರಿಂದ ಶನಿವಾರ (ಆ.6) ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ರಜೆ ಘೋಷಿಸಿದ್ದಾರೆ.

ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬಿರುಕು! ತಾತ್ಕಾಲಿಕವಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ.

ಏಳು ಕಿಮೀ ದೂರ ಕೊಚ್ಚಿ ಬಂದ ನಾಲ್ಕು ಕಾಲು ಬೆಟ್ಟಸಂಪಾಜೆ ಬಳಿಯ ಚೆಂಬು ಗ್ರಾಮ ವ್ಯಾಪ್ತಿಯ ದಬ್ಬಡ್ಕದಲ್ಲಿ ಭಾರೀ ಭೂ ಕುಸಿತ ಉಂಟಾಗಿದೆ. ಇಲ್ಲಿರುವ ನಾಲ್ಕು ಕಾಲು ಬೆಟ್ಟ ಏಳು ಕಿ.ಮೀ ದೂರ ಕೊಚ್ಚಿ ಬಂದಿದೆ. ಭೂ ಕುಸಿತದ ವೇಳೆ ಭಾರೀ ಜಲಸ್ಪೋಟ ಉಂಟಾಗಿದೆ. ಭಯಾನಕ ಶಬ್ದದೊಂದಿಗೆ ನಾಲ್ಕು ಕಾಲು ಗುಡ್ಡ ಕೊಚ್ಚಿ ಬಂದಿದೆ. ಇದರಿಂದ ಭಯಭೀತರದಾದ ದಬ್ಬಡ್ಕ, ಕೊಪ್ಪ, ಅಡ್ಡಹೊಳೆ ನಿವಾಸಿಗಳು ಊರು ತೊರೆದು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button