ಅಪಘಾತಬೆಂಗಳೂರು

ಕ್ರಿಸ್ಮಸ್‌ ಪ್ರಯುಕ್ತ ಚರ್ಚ್‌ಗೆ ಹೊಸ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಅಪಘಾತಕ್ಕೆ ಬಲಿ

ಬೆಳಗಿನ ಜಾವ ಕ್ರಿಸ್ಮಸ್‌ ಪ್ರಾರ್ಥನೆಗೆಂದು ಆಲೆಕ್ಸ್ ಮತ್ತು ಸತೀಶ್ ರಿಜಸ್ಟರ್ ನಂಬರ್ ಹಾಕದ ಹೊಸ ಬೈಕ್​ನಲ್ಲಿ ಬೆಂಗಳೂರಿನ ಸೇಂಟ್ ಪ್ಯಾಟ್ರಿಕ ಬೆಸಲಿಕಾ ಚರ್ಚ್​ಗೆ ತೆರಳುತ್ತಿದ್ದಾಗ ನಡೆದ ಅಪಘಾತದಲ್ಲಿ ಅಲೆಕ್ಸ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗೋಪಾಲಗೌಡ ಜಂಕ್ಷನ್ ಬಳಿ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಬೈಕ್‌ ಫುಟ್‌ಪಾತ್ ಗೋಡೆಗೆ ಬೈಕ್​ ಗುದ್ದಿದೆ.

ಹಿಂಬದಿ ಸವಾರ ಸತೀಶ್ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button