ಅಪರಾಧರಾಜ್ಯ

ಗರ್ಭಿಣಿ ಪತ್ನಿಗೆ ಮದ್ಯ ಕುಡಿಸಿ ಕೊಂದಿದ್ದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ

ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್ ನೊಟ್ಟಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಕೊಳ್ಳೇಗಾಲ ತಾಲೂಕಿನ ರಾಚಪ್ಪಾಜಿನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ.

ಕಳೆದ 2013 ರಲ್ಲಿ ಗರ್ಭಿಣಿ ಪತ್ನಿಯನ್ನು ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಮುತ್ತುರಾಜ್‌ಗೆ ಜೀವಾವಧಿ ಶಿಕ್ಷೆ ಮತ್ತು 2.10 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಏನಿದು ಕೊಲೆ ಕಹಾನಿ: ಮುತ್ತುರಾಜ್ ಟ್ರಾಕ್ಟರ್ ಚಾಲಕನಾಗಿದ್ದು ಅದೇ ಗ್ರಾಮದ ಜ್ಯೋತಿ ಎಂಬ ಅನ್ಯಜಾತಿ ಯುವತಿಯನ್ನು ಪ್ರೀತಿಸುತ್ತೇನೆಂದು ಆಕೆಯ ಹಿಂದೆ ಬಿದ್ದು ಮನೆಯವರ ವಿರೋಧದ ನಡುವೆ ವಿವಾಹವಾಗಿದ್ದ.

ಬಳಿಕ, ತಗಾದೆ ತೆಗೆದು ಮದುವೆ ಆಗಬಾರದಿತ್ತು ಎಂದು ನಿತ್ಯ ರಂಪಾಟ ಮಾಡುತ್ತಿದ್ದ ಹೊತ್ತಿನಲ್ಲೇ ಜ್ಯೋತಿ 3 ತಿಂಗಳ ಗರ್ಭಿಣಿಯಾಗಿದ್ದಳು.

ಗರ್ಭಿಣಿಯಾಗಿರುವುದರಿಂದ ತವರು ಮನೆಗೆ ಹೋಗಿ ಬಾ ಎಂದು ಪುಸಲಾಯಿಸಿ ಬೈಕಿನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಜ್ಯೂಸ್ ನೊಟ್ಟಿಗೆ ಮದ್ಯ ಸೇರಿಸಿ ಕುಡಿಸಿ ಬಳಿಕ ಆಕೆಯ ದುಪ್ಪಟ್ಟದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದ, ಗುರುತು ಪತ್ತೆಯಾಗದಿರಲೆಂದು ಎಡಕೆನ್ನೆಯನ್ನು ಸುಟ್ಡು ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುತ್ತುರಾಜ್ ನನ್ನು ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು;

ನಿರಂತರ ವಿಚಾರಣೆ ನಡೆದು ಮುತ್ತುರಾಜ್ ನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಟಿ.ಹೆಚ್‌.ಲೋಲಾಕ್ಷಿ ವಾದ ಮಂಡಿಸಿದ್ದರು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button