
ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಚ್ಚರಿ ಹೇಳಿಕೆ ನೀಡಿದ್ದು, ಈ ಈದ್ಗಾ ಮೈದಾನ ನಮ್ಮ ಸ್ವತ್ತು ಅಲ್ಲ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಅನುಮತಿ ಕೋರಿದ್ದ ಬಳಿಕತೀವ್ರ ವಿವಾದ ಹುಟ್ಟು ಹಾಕಿಕೊಂಡಿತ್ತು. ಆನಂತರ, ಬಿಬಿಎಂಪಿ ಇದು ನಮ್ಮ ಸ್ವತ್ತು ಎಂದೂ ಹೇಳಿತ್ತು. ಆದರೆ, ಇದೀಗ ಉಲ್ಟಾ ಹೊಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ನಗರದಲ್ಲಿಂದು ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ, ಚಾಮರಾಜಪೇಟೆ ಮೈದಾನ ವಿವಾದ ಸಂಬಂಧ 1974ನೇ ಸಾಲಿನಲ್ಲಿ ಸಿಟಿ ಸರ್ವೆ ಪ್ರಕಾರ ನಮ್ಮ ಖಾತೆ ಇದೆ ಎಂದು ಉಲ್ಲೇಖವಾಗಿದೆ.
ಮೇಲ್ನೋಟಕ್ಕೆ ಮೈದಾನದ ಸ್ವಾಮಿಥ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲ. ಆದರೆ, ಖಾತಾ ಪ್ರಕಾರ ಮಾಲಿಕತ್ವ ನಮ್ಮದು ಇದೆ. ಇನ್ನೂ, ವಕ್ ಬೋರ್ಡ್ ದಾಖಲೆ ಸಮೇತ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ದಾಖಲೆ ನೋಡಿದ ಬಿಬಿಎಂಪಿ:ಮತ್ತೊಂದೆಡೆ ಇತ್ತೀಚೆಗೆ ವಕ್ ಬೋರ್ಡ್ ಮಂಡಳಿ ಮೈದಾನಕ್ಕೆ ಸಂಬಂಧಿಸಿದಂತೆ ಮೈಸೂರು ಆಡಳಿತ ಕಾಲದಿಂದಲೂ ಇದ್ದ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಕೆ ಮಾಡಿತ್ತು. ಇದನ್ನು ಬಿಬಿಎಂಪಿ ಕಾನೂನು ವಿಭಾಗ ಪರಿಶೀಲನೆ ನಡೆಸಿ, ಈ ಸ್ವತ್ತು ನಮ್ಮದಲ್ಲ ಎನ್ನುವ ಅಭಿಪ್ರಾಯ ಹೇಳಿತ್ತು ಎನ್ನಲಾಗಿದೆ.
ಖಾತೆಗೆ ಸಲ್ಲಿಕೆ:ಈದ್ಗಾ ಮೈದಾನ ವಿವಾದ ಸಂಬಂಧ ಈಗಾಗಲೇ ನಾವು ಖಾತೆಗಾಗಿ ಬಿಬಿಎಂಪಿಗೆ ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಇನ್ನೂ ಬಿಬಿಎಂಪಿ ಇದು ನಮ್ಮ ಸ್ವತ್ತು ಅಲ್ಲ ಎಂದಿರುವುದು ಸಂತಸ ತಂದಿದೆ ಎಂದು ವಕ್ ಬೋರ್ಡ್ ಅಧ್ಯಕ್ಷ ಮೌಲಾನಾ ಶಾಫಿ ಸಾದಿ ಹೇಳಿದರು.