ಅಪಘಾತಅಪರಾಧ

ಚಿತ್ರೀಕರಣದ ವೇಳೆ ಎಡವಟ್ಟು: ಮೇಲುಕೋಟೆ ರಾಜಗೋಪುರವನ್ನು ಬಾರ್ ರೀತಿ ಪರಿವರ್ತಿಸಿ ಶೂಟಿಂಗ್​

ಮಂಡ್ಯ: ಮೇಲುಕೋಟೆಯಲ್ಲಿ ಮತ್ತೆ ಪರಭಾಷಿಕ ಚಿತ್ರತಂಡ ಎಡವಟ್ಟು ಮಾಡಿದೆ.

ಜಿಲ್ಲೆಯ ಪಾಂಡವಪುರ ತಾಲೂಕಿನ ವಿಶ್ವ ಪ್ರಸಿದ್ಧ ಮೇಲುಕೋಟೆಯ ರಾಜಗೋಪುರವನ್ನು ಬಾರ್ ರೀತಿಯಲ್ಲಿ ಪರಿವರ್ತಿಸಿ ಚಿತ್ರೀಕರಣ ನಡೆಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಾಗ ಚೈತನ್ಯ ಅಭಿನಯದ 3 ನಾಟ್ 2 ಚಿತ್ರತಂಡ ಮೇಲುಕೋಟೆ ಪರಂಪರೆಗೆ ಧಕ್ಕೆಯಾಗುವಂತಹ ಸೆಟ್ ಹಾಕಿದೆ. ವಿವಿಧ ಬ್ರ್ಯಾಂಡ್‌ಗಳ ಮದ್ಯದ ಬಾಟಲ್‌ಗಳಿಟ್ಟು ಚಿತ್ರೀಕರಣ ಮಾಡಿದ್ದು, ಪಾರಂಪರಿಕ ರಾಜಗೋಪುರದಲ್ಲಿ ಬಾರ್ ರೀತಿಯ ಸೆಟ್ ಹಾಕುವ ಮೂಲಕ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ.

ಮೇಲುಕೋಟೆ ರಾಜಗೋಪುರವನ್ನು ಬಾರ್ ರೀತಿ ಪರಿವರ್ತಿಸಿ ಶೂಟಿಂಗ್​

ಮಂಡ್ಯ ಡಿಸಿ 2 ದಿನಗಳ ಚಿತ್ರೀಕರಣಕ್ಕೆ ಷರತ್ತುಬದ್ಧ ಅನುಮತಿ ನೀಡಿದ್ದರು. ಇದೀಗ ಆ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

: ಅನುಮತಿ ದುರ್ಬಳಕೆ: ಮೇಲುಕೋಟೆಯಲ್ಲಿ ಚಿತ್ರೀಕರಣಕ್ಕೆ ಸದ್ಯ ಅವಕಾಶವಿಲ್ಲ

ಈ ಹಿಂದೆಯೂ ಮೇಲುಕೋಟೆ ಕಲ್ಯಾಣಿಯಲ್ಲಿ ತೆಲುಗು ಚಿತ್ರ ತಂಡವೊಂದು ಶೂಟಿಂಗ್ ನಡೆಸಿ ಕಿರಿಕಿರಿ ಮಾಡಿತ್ತು. ನಾಗಚೈತನ್ಯ ನಟನೆಯ ಸಿನಿಮಾ ಚಿತ್ರೀಕರಣ ವೇಳೆ ರಾಜಮುಡಿ ಉತ್ಸವಕ್ಕೆ ಅಡಚಣೆಯಾಗಿತ್ತು. ಹೀಗಾಗಿ, ಪರಭಾಷಿಕ ಚಿತ್ರಗಳ ಶೂಟಿಂಗ್‍ನಿಂದ ಮೇಲುಕೋಟೆ ಪರಂಪರೆಗೆ ಪದೇ, ಪದೇ ಧಕ್ಕೆ ಬರುತ್ತಿದೆ. ಮೇಲುಕೋಟೆಯಲ್ಲಿ ಶೂಟಿಂಗ್‍ಗೆ ಅನುಮತಿ ನೀಡಬಾರದು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button