ಅಪರಾಧರಾಷ್ಟ್ರಿಯ

ತೆಲಂಗಾಣ ಬಿಜೆಪಿ ನಾಯಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

ಹೈದರಾಬಾದ್: ತೆಲಂಗಾಣ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿದಾಗ, ಪ್ರಸಾದ್ ಅವರು ಫ್ಯಾನ್‌ಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತೆಲಂಗಾಣದ ಮಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮಿಯಾಪುರ ಪೊಲೀಸರಿಗೆ ಸೋಮವಾರ ಮುಂಜಾನೆ ಸಿಕ್ಕಿತ್ತು. ಪೊಲೀಸರು ಅಲ್ಲಿ ತೆರಳಿ ತನಿಖೆ ನಡೆಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ ಒಂದು ತಂಡವನ್ನು ಸ್ಥಳಕ್ಕೆ ರವಾನಿಸಲಾಯಿತು. ತಮ್ಮ ನಿವಾಸದಲ್ಲಿನ ಫ್ಯಾನ್‌ಗೆ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡಿರುವುದು ಪೊಲೀಸರಿಗೆ ಕಂಡುಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಆದರೆ ಅವರು ಕಳೆದ ಕೆಲವು ದಿನಗಳಿಂದ ಅಲ್ವಿನ್ ಕಾಲೋನಿಯಲ್ಲಿನ ತಮ್ಮ ಪೆಂಟ್‌ಹೌಸ್‌ನಲ್ಲಿ ವಾಸವಾಗಿದ್ದರು ಎನ್ನುವುದು ಗೊತ್ತಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 174ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಸೆರ್ಲಿಂಗಮ್‌ಪಲ್ಲಿ ಪ್ರದೇಶದ ನಾಯಕರಾಗಿರುವ ಜ್ಞಾನೇಂದ್ರ ಪ್ರಸಾದ್ ಅವರು, ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾಗಿದ್ದರು. ಅವರು ಕೆಲವು ದಿನಗಳಿಂದ ಯಾವುದೇ ವಿಷಯಕ್ಕೆ ಬಹಳ ಬೇಸರದಿಂದ ಇದ್ದರು ಎನ್ನಲಾಗಿದೆ.

“ಪೆಂಟ್‌ಹೌಸ್‌ನಲ್ಲಿ ಜ್ಞಾನೇಂದ್ರ ಪ್ರಸಾದ್ ಅವರು ನೇಣು ಹಾಕಿಕೊಂಡಿರುವುದನ್ನು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅವರ ಕುಟುಂಬದ ಸದಸ್ಯರೊಬ್ಬರು ನೋಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಜ್ಞಾನೇಂದ್ರ ಪ್ರಸಾದ್ ಅವರು ಬೆಳಿಗ್ಗೆ 9 ಗಂಟೆ ಸುಮಾರಿಗೆ ನೇಣು ಹಾಕಿಕೊಂಡಿರಬಹುದು. ಅವರಿದ್ದ ಕೊಠಡಿಯ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು” ಎಂದು ಪೊಲೀಸರು ಹೇಳಿದ್ದಾರೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button