
ಬೆಂಗಳೂರು ನಗರದಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆಮಾಡಿಕೊಂಡಿದ್ದಾಳೆ. ಶಿವಮೊಗ್ಗ ಮೂಲದ ರಕ್ಷಿತಾ ಬಸವೇಶ್ವರನಗರದ ಕಮಲಾನಗರದಲ್ಲಿ ಅಣ್ಣನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇತ್ತೀಚೆಗಷ್ಟೆ ರಕ್ಷಿತಾಗೆ ನಿಶ್ಚಿತಾರ್ಥ ಆಗಿತ್ತು.
18 ವರ್ಷ ತುಂಬಿದ ಬಳಿಕ ಪೋಷಕರು ಮದುವೆ ಮಾಡುವ ಯೋಚನೆಯಲ್ಲಿದ್ದರು. ರಕ್ಷಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಸವೇಶ್ವರನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.