ಪಕ್ಷದ ಡ್ಯಾಮೇಜ್ ತಡೆಯಲು ಹೇಳಿಕೆ ವಾಪಸ್ : ಸತೀಶ್ ಜಾರಕಿಹೊಳಿ

ಬೆಳಗಾವಿ: ಪಕ್ಷಕ್ಕೆ ಡ್ಯಾಮೇಜ್ ಆಗುವುದನ್ನು ತಡೆಯಲು ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ನಾನು ಹೇಳಿದ ಮಾತನ್ನು ವಾಪಸ್ ಪಡೆಯಲು ಒತ್ತಡ ಇತ್ತು.
ನನ್ನ ಹೇಳಿಕೆಯನ್ನು ವಾಪಸ್ ಪಡೆದಿರುವೆ. ನಿನ್ನೆ ಎಲ್ಲ ನಾಯಕರೊಂದಿಗೆ ಚರ್ಚೆ ನಡೆಸಿ ವಾಪಸ್ ಪಡೆದಿದ್ದೇನೆ ಎಂದರು.ನೈಜ ಸುದ್ದಿ ಬಿಟ್ಟು ಬೇರೆ ಬೇರೆ ಆಯಾಮದಲ್ಲಿ ಚರ್ಚೆ ಆರಂಭ ಆಗಿದೆ. ವೈಯಕ್ತಿಕವಾಗಿ ಪಕ್ಷಕ್ಕೆ ಡ್ಯಾಮೇಜ್ ಆಯಿತು.
ಅದು ಖಾಸಗಿ ಕಾರ್ಯಕ್ರಮ, ಪಕ್ಷದ ಕಾರ್ಯಕ್ರಮ ಅಲ್ಲ ಎಲ್ಲರೂ ಬೆಂಬಲಿಸುವ ನಿರೀಕ್ಷೆ ಇರಲಿಲ್ಲ. ಆದರೂ ಕೆಲವರು ಮಾತನಾಡಿದ್ದಾರೆ ಎಂದರು..ಇದು ಇಷ್ಟಕ್ಕೆ ನಿಂತಿಲ್ಲ ಸ್ವಪಕ್ಷ, ವಿರೋಧ ಪಕ್ಷ ಹಾಗೂ ಮಾಧ್ಯಮಗಳ ಮುಂದೆ ಕೆಲ ಸಂಗತಿ ಹೇಳುತ್ತೇವೆ.
ನನಗೆ ಪಕ್ಷ ದೊಡ್ಡದು ಹೀಗಾಗಿ ಪಕ್ಷದ ಡ್ಯಾಮೇಜ್ ಆಗಬಾರದೆಂದು ಆ ಪದ ವಾಪಸ್ ಪಡೆದಿರುವೆ ನನ್ನ ಮೇಲಿನ ಆರೋಪದ ಬಗ್ಗೆ ಎಲ್ಲರಿಗೂ ತಿಳಿಸುವ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿಗಳು ನನ್ನ ಪತ್ರದ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.