Uncategorized

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ವಜಾಗೊಳಿಸುವಂತೆ ಸೂಚಿಸಬೇಕು ಎಂದು ರುಪ್ಸಾ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ( Textbook revision controversy ) ಸದ್ಯಕ್ಕೆ ಮುಗಿಯುವಂತಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ವಿಚಾರ ಸೇರಿದಂತೆ ಶಿಕ್ಷಣ ಇಲಾಖೆಯ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ವಜಾಗೊಳಿಸುವಂತೆ ಸೂಚಿಸಬೇಕು ಎಂದು ರುಪ್ಸಾ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ.
ಈ ಬಗ್ಗೆ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ( ರುಪ್ಸಾ ಕರ್ನಾಟಕ ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ರಾಜ್ಯದ ಪ್ರತಿ ಮಗುವಿಗೂ ಕಡ್ಡಾಯವಾಗಿ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಆದ್ರೇ ಕರ್ನಾಟಕದಲ್ಲಿ ಇದರ ಕನಿಷ್ಠ ಜ್ಞಾನವೂ ಇಲ್ಲದ ಪಕ್ಕಾ ವ್ಯಾಪಾರಿ ಮನೋಭಾವನದ ವ್ಯಕ್ತಿ ಮಂತ್ರಿಯಾಗಿರುವ ಹಿನ್ನಲೆಯಲ್ಲಿ, ಇದು ಈಡೇರುತ್ತಿಲ್ಲ. ಈ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡುವಂತೆ ಸಿಎಂ ಬೊಮ್ಮಾಯಿಗೆ ಸೂಚಿಸಬೇಕು ಎಂದು ಕೋರಿದ್ದಾರೆ

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button