ಅಪರಾಧಬೆಂಗಳೂರುರಾಜ್ಯ

ಬಾಯ್‌ಫ್ರೆಂಡ್‌ ಜತೆ ಹೋಟೆಲ್‌ನಲ್ಲಿ ತಂಗಿದ್ದ ಮೈಸೂರಿನ ವಿದ್ಯಾರ್ಥಿನಿ ನಿಗೂಢ ಸಾವು: ಯುವಕ ಎಸ್ಕೇಪ್‌!

ಮೈಸೂರು: ಶಾಂತಿಗೆ ಹೆಸರಾಗಿದ್ದ ಮೈಸೂರು ಇತ್ತೀಚೆಗೆ ಕ್ರೈಂನಿಂದಲೂ ಕುಖ್ಯಾತಿ ಗಳಿಸುತ್ತಿದೆ. ಕೆಲ ತಿಂಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿತ್ತು. ಇದೀಗ ಮೈಸೂರಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದು ಅರಮನೆ ನಗರಿ ಬೆಚ್ಚಿಬಿದ್ದಿದೆ.

ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಪ್ರತಿಷ್ಠಿತ ಕೋರಂ ಖಾಸಗಿ ಹೋಟೆಲ್‌ನಲ್ಲಿ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಜೊತೆಗಿದ್ದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಅಪೂರ್ವ ಶೆಟ್ಟಿ ಎಂಬಾಕೆ ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿಯಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಯುವಕನ ಜೊತೆ ಬಂದ ಅಪೂರ್ವ ಶೆಟ್ಟಿ ಕೊಠಡಿ ಪಡೆದು ತಂಗಿದ್ದರು. ಆದರೆ ಇಂದು ಯುವಕ ಕೊಠಡಿಯಲ್ಲಿ ಇಲ್ಲದ ವೇಳೆ ಯುವತಿಯ ಮೃತದೇಹ ಪತ್ತೆಯಾಗಿದೆ.

ಮೃತ ಯುವತಿಯ ಬಾಯಲ್ಲಿ ನೊರೆ ಬರುತ್ತಿದ್ದು, ಈ ಸಾವು ಸಹಜವೋ ಅಥವಾ ಕೊಲೆಯೋ ಅನ್ನೋದು ತನಿಖೆಯ ನಂತರ ತಿಳಿದು ಬರಬೇಕಿದೆ.

ಸದ್ಯ ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುವಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಜೊತೆಗೆ ಮೃತಪಟ್ಟ ಯುವತಿಯ ಬಗ್ಗೆಯೂ ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.

ಯಾವಾಗ ಯುವತಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂತೋ ಮೈಸೂರು ನಗರ ಅಪರಾಧ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಹೋಟೆಲ್‌ಗೆ ಭೇಟಿ ಕೊಟ್ಟಿದ್ದಾರೆ.

ಬಳಿಕ ಈ ಘಟನೆ ಕುರಿತು ಮಾಹಿತಿ ನೀಡಿದ ಡಿಸಿಪಿ, ಯುವತಿ ಸಾವನ್ನಪ್ಪಿರುವ ಬಗ್ಗೆ ಹೋಟೆಲ್‌ನ ಆಡಳಿತ ಮಂಡಳಿಯವರು ಕರೆ ಮಾಡಿದ್ದರು. ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಯುವತಿಯ ಗುರುತು ಪತ್ತೆಯಾಗಿದೆ.

21 ವರ್ಷದ ಯುವತಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಕರೆಸಿದ್ದೇವೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣವೇನೆಂದು ತಿಳಿಯಲಿದೆ ಅಂತ ಹೇಳಿದ್ರು.

ಮೈಸೂರಿನ ವಿಜಯನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪೂರ್ವ ಶೆಟ್ಟಿ ಕೊಲೆಯಾದ ಯುವತಿ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದ ಅಪೂರ್ವ ಶೆಟ್ಟಿ ತುಂಬಾನೆ ಸನ್ನಡತೆಯ ಹುಡುಗಿ ಅಂತ ಸ್ನೇಹಿತರು ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭವಿತ್ತು. ಆಗಸ್ಟ್ 30ರಂದು ಯುವಕನ ಜೊತೆ ಹೋಟೆಲ್‌ಗೆ ಬಂದು ಕೊಠಡಿ ಬಾಡಿಗೆಗೆ ಪಡೆದು ವಾಸ್ತವ್ಯ ಹೂಡಿದ್ದ ಅಪೂರ್ವ ಶೆಟ್ಟಿ, 2 ದಿನಗಳಿಂದ ಅಲ್ಲಿಯೇ ಇದ್ದಳು.

ಜೊತೆಯಲ್ಲಿದ್ದ ಯುವಕ ಹಿನಕಲ್‌ನಲ್ಲಿ ವಾಸಿಸುತ್ತಿದ್ದ ಬಗ್ಗೆ ಮಾಹಿತಿ ಕೂಡ ಲಭ್ಯವಾಗಿದೆ. ಯುವಕನ ಮೂಲ ಕೆದಕುತ್ತಿರುವ ಪೊಲೀಸರು, ಆತನಿಗಾಗಿ ಬಲೆ ಬೀಸಿದ್ದಾರೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button