ಬೆಂಗಳೂರುಸಂಸ್ಕೃತಿ

ಬೆಂಗಳೂರಿನ ಈ ರಸ್ತೆಗಳು ಬಂದ್!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಹಬ್ಬದ ಸಂಭ್ರಮ ಮುಂದುವರೆದಿದೆ. ಈ ಹಿನ್ನೆಲೆ ಇಂದು ಸಿಲಿಕಾನ್ ಸಿಟಿಯ ಕೆಲವು ಪ್ರಮುಖ ರಸ್ತೆಗಳು ಬಂದ್ ಆಗಲಿವೆ. 4 ಮತ್ತು 5ನೇ ದಿನ ಗಣೇಶನ ವಿಗ್ರಹ ಪ್ರತಿಷ್ಠಾಪಿಸಿ ಪೂಜೆ ಮಾಡಿದ ನಂತರ ವಿಸರ್ಜನೆ ಕಾರ್ಯ ನಡೆಯಲಿದೆ.

ಇಂದು ಅತೀಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ಸಾಧ್ಯತೆ ಇರುವುದರಿಂದ ಕೆಲ ರಸ್ತೆಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿಸಿದೆ.

ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆ ಕೆಲ ರೋಡ್‍ಗಳ ಸಂಚಾರಕ್ಕೆ ನಿರ್ಬಂಧ ಹೇರಿದೆ. ವಾಹನ ಪ್ರಯಾಣಕ್ಕೆ ಪೊಲೀಸ್ ಇಲಾಖೆ ಬದಲಿ ರಸ್ತೆಗಳ ವ್ಯವಸ್ಥೆ ಮಾಡಿದೆ. ಪೂರ್ವ ವಿಭಾಗದ ಕೆಲ ಸಂಚಾರಿ ಮಾರ್ಗಗಳ ಬದಲಾವಣೆ ಮಾಡಲಾಗಿದೆ.

ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧವಿರಲಿದ. ನಾಗವಾರ ಜಂಕ್ಷನ್‍ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಭಾಗಶಃ ಸಂಚಾರ ಬಂದ್ ಆಗಲಿದೆ. ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗಿದೆ.

ಕೆಲವೆಡೆ ರಸ್ತೆಯ 2 ಬದಿಯಲ್ಲಿ ವಾಹನಗಳ ಪಾರ್ಕಿಂಗ್‌ ನಿರ್ಬಂಧಿಸಲಾಗಿದೆ. ವಾಹನ ಸವಾರರು ಸಹಕರಿಸಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.

ಯಾವೆಲ್ಲಾ ರಸ್ತೆಗಳು ಬಂದ್? & ಬದಲಿ ಮಾರ್ಗ ನಾಗವಾರ ಭಾಗಥಣಿಸಂದ್ರ ಟು ಶಿವಾಜಿನಗರ ಜಂಕ್ಷನ್‌ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನಾಗವಾರ ಜಂಕ್ಷನ್‌ನಿಂದ ಸಂಚಾರಹೆಣ್ಣೂರು ಜಂಕ್ಷನ್-ಸಿದ್ದಪ್ಪ ರೆಡ್ಡಿ ಜಂಕ್ಷನ್-ಅಯೋಧ್ಯ ಜಂಕ್ಷನ್ ಲಿಂಗರಾಜಪುರಂಐಟಿಸಿ ಫೈ ಓವರ್ ಮೂಲಕ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದುನಾಗವಾರ ಕಡೆ ಬರುವವರು ಹೀಗೆ ಬನ್ನಿ…

ಶಿವಾಜಿನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆ, ಕೋಲ್ಸ್ ರಸ್ತೆ, ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಲು ಅವಕಾಶಆರ್.ಟಿ.ನಗರದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣಪಾಳ್ಯ ಜಂಕ್ಷನ್‌ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.

ವಾಹನ ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳುಪಾಟರಿ ಸರ್ಕಲ್‍ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್‍ನಿಂದ ಗೋವಿಂದಪುರ ಪೊಲೀಸ್ ಠಾಣೆಯವರೆಗೆ

ಹೆಚ್.ಬಿ.ಆರ್.ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‍ನಿಂದ ನರೇಂದ್ರ ಟೆಂಟ್, ಜಂಕ್ಷನ್‍ವರೆಗೆ ವಾಹನ ಸಂಚಾರ ನಿರ್ಬಂಧವಿರಲಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button