Uncategorized

ಬೆಂಗಳೂರಿನ 37ನೇ ಪೊಲೀಸ್ ಕಮಿಷನರ್ ಆಗಿ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಬೆಂಗಳೂರು: ನಗರದ 37ನೇ ಪೊಲೀಸ್ ಕಮಿಷನರ್ ಆಗಿ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕಮಿಷನರ್ ಕಮಲ್‌ ಪಂತ್ ಅವರು ಬ್ಯಾಟನ್ ನೀಡುವ ಮೂಲಕ ನೂತನ ಕಮಿಷನರ್ ಪ್ರತಾಪ್‌ ರೆಡ್ಡಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
1991ರ ಐಪಿಎಸ್ ಬ್ಯಾಚ್ ಅಧಿಕಾರಿಯಾದ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರಿನವರು. ಕೃಷಿ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಮುಗಿಸಿರುವ ಇವರು, ಸಾರ್ವಜನಿಕ ಯೋಜನೆ ಹಾಗೂ ನಿರ್ವಹಣೆ ವಿಷಯದಲ್ಲಿ ಸ್ನಾತಕ ಪದವಿ ಪೂರ್ಣಗೊಳಿಸಿದ್ದಾರೆ‌. 1991ರಲ್ಲಿ ಹಾಸನ ಜಿಲ್ಲೆಯ ಅರಸೀಕೆರೆಯ ಎಎಸ್ಪಿ ಆಗುವ ಮೂಲಕ ವೃತ್ತಿ ಆರಂಭಿಸಿದ್ದರು.

ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಅವಕಾಶ ನೀಡಿದ್ದಕ್ಕೆ ಧನ್ಯವಾದ. ಬೆಂಗಳೂರಿನ ಜನರ ರಕ್ಷಣೆಗೆ ಬದ್ಧನಾಗಿ ಕೆಲಸ ಮಾಡುತ್ತೇನೆ’ ಎಂದರು.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button