ಅಪರಾಧ

ಬೆರಳು ಕೊಯ್ದು ಚಿನ್ನದ ವಿಗ್ರಹಕ್ಕೆ ರಕ್ತ ಅಭಿಷೇಕ;ನಿಧಿ ಆಸೆ ತೋರಿಸಿ 5 ಲಕ್ಷ ರೂ. ಪಂಗನಾಮ

ಹಾಸನ: ನಿಧಿ ಆಸೆ ತೋರಿಸಿ ದಂಪತಿಗೆ 5 ಲಕ್ಷ ರೂಪಾಯಿ ಪಂಗನಾಮ ಹಾಕಿದ ಕಳ್ಳ ಸ್ವಾಮೀಜಿಯೊಬ್ಬ ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಮಂಜೇಗೌಡ-ಲೀಲಾವತಿ ಹಣ ಕಳೆದುಕೊಂಡ ದಂಪತಿ. ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಆರೋಪಿ ಮಂಜೇಗೌಡ ನಿಮ್ಮ ಜಮೀನಿನಲ್ಲಿ ನಿಧಿ ಇದ್ದು, ನನ್ನಲ್ಲಿರುವ ದೈವ ಶಕ್ತಿಯಿಂದ ಅದನ್ನು ಹೊರ ತೆಗೆಯುತ್ತೇನೆ ಎಂದು ದಂಪತಿಯನ್ನು ನಂಬಿಸಿದ್ದಾನೆ. ಇದಕ್ಕೂ ಮುನ್ನ ಮಂಜೇಗೌಡರ ಹೊಲದಲ್ಲಿ ಚಿನ್ನ ಲೇಪಿತ ಮೂರು ಕೆಜಿ ಬೆಳ್ಳಿ ವಿಗ್ರಹ ಹೂತಿಟ್ಟಿದ್ದಾನೆ.

ನಂತರ ರಾತ್ರಿ ವೇಳೆ ಜಮೀನಿಗೆ ಮಂಜೇಗೌಡ-ಲೀಲಾವತಿ ಕರೆದೊಯ್ದು ಮೊದಲು ಪೂಜೆ ಮಾಡಿ, ಜಮೀನಿನಲ್ಲಿ ಹೂತಿಟ್ಟಿದ್ದ ಚಿನ್ನ ಲೇಪಿತ ವಿಗ್ರಹ ಹೊರತೆಗೆದು ತೊಳೆದು ದಂಪತಿಗೆ ನೀಡಿದ್ದಾನೆ.

ಇಷ್ಟಕ್ಕೆ ಸುಮ್ಮನಾಗದ ಮಂಜೇಗೌಡ ಚಿನ್ನದ ವಿಗ್ರಹಕ್ಕೆ ರಕ್ತ ಅಭಿಷೇಕ ಮಾಡಬೇಕು ಎಂದು ಲೀಲಾವತಿಯ ಬೆರಳನ್ನೇ ಕೊಯ್ದಿದ್ದಾನೆ. ಬೆರಳು ಕೊಯ್ದ ರಭಸಕ್ಕೆ ಮಹಿಳೆ ಕೈ ಬೆರಳಿನ ನರವೇ ಕತ್ತರಿಸಿ ಹೋಗಿದೆ.

ಒಂದು ವಾರದ ನಂತರ ಮಂಜೇಗೌಡ-ಲೀಲಾವತಿ ಜ್ಯೂವೆಲರಿ ಶಾಪ್‌ಗೆ ತೆರಳಿ ವಿಗ್ರಹ ಪರಿಶೀಲಿಸಿದಾಗ ಬೆಳ್ಳಿ ವಿಗ್ರಹ ಎಂಬುದು ಪತ್ತೆಯಾಗಿದೆ. ಇತ್ತ ಕಳ್ಳ ಸ್ವಾಮೀಜಿ ದಂಪತಿಗೆ ವಂಚಿಸಿ ಫೋನ್ ಸ್ವಿಚ್ಡ್‌ ಆಫ್ ಮಾಡಿಕೊಂಡು ಹಣದ ಸಮೇತ ಎಸ್ಕೇಪ್ ಆಗಿದ್ದಾನೆ. ಇತ್ತ ಗಾಯಗೊಂಡಿದ್ದ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗಿದ್ದಾರೆ.

ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದುವರೆಗೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button