ಅಪಘಾತರಾಜ್ಯ

ಬೈಂದೂರು: ಕಾಲು ಸಂಕ ದಾಟುವಾಗ ಜಾರಿ ನೀರಿಗೆ ಬಿದ್ದಿದ್ದ 2ನೇ ತರಗತಿ ಬಾಲಕಿ, ಮೂರು ದಿನಗಳ ಬಳಿಕ ಮೃತದೇಹ ಪತ್ತೆ

ಉಡುಪಿ: ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿಯ ಮೃತದೇಹ ಮೂರು ದಿನದ ಬಳಿಕ ಬುಧವಾರ ಪತ್ತೆಯಾಗಿದೆ.ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಇಂದು ಸಂಜೆ ಸಂಕದ ಸಮೀಪದಲ್ಲಿ ಪತ್ತೆಯಾಗಿದೆ.

ಸೋಮವಾರ ಸಂಜೆ ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಬುಧವಾರ ಸಂಜೆ ಆಕೆಯ‌ ಮೃತದೇಹ ಕಾಲುಸಂಕದಿಂದ 400 ಮೀಟರ್ ದೂರದಲ್ಲಿ ಪತ್ತೆಯಾಗಿದೆಅಗ್ನಿಶಾಮಕ ದಳ ಸಿಬ್ಬಂದಿಗಳು, ಈಜು ಪಟುಗಳಾದ ಪೋಲಿಸ್ ಇಲಾಖೆ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ‌ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಾಚರಣೆಗೆ ಎರಡು ದೋಣಿಗಳನ್ನು ಬಳಸಿಕೊಳ್ಳಲಾಗಿದೆ.

ಮೀನುಗಾರರು ಹಾಗೂ ಈಜುಪಟುಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡದ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಸ್ಥಳದಲ್ಲಿದ್ದ ಬೈಂದೂರು ತಹಶಿಲ್ದಾರ್ ಕಿರಣ್ ಗೌರಯ್ಯ ಅವರು ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ ಸೂಕ್ತ ಕ್ರಮಕೈಗೊಂಡರು.

ಉಡುಪಿ‌ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಕುಂದಾಪುರ ಉಪವಿಭಾಗಾಧಿಕಾರಿ‌ ಕೆ. ರಾಜು ಮಾರ್ಗದರ್ಶನದಲ್ಲಿ ಬಾಲಕಿ ಮೃತದೇಹ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಎನ್., ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಸ್ಥಳದಲ್ಲಿದ್ದರು.

ಕುಂದಾಪುರಕ್ಕೆ ಸಚಿವ ಅಂಗಾರ ಭೇಟಿಕುಂದಾಪುರ: ಬ್ಯೆಂದೂರಿನಲ್ಲಿ 2ನೇ ತರಗತಿ ಬಾಲಕಿ ಕಾಲು ಸಂಕದಿಂದ ಬಿದ್ದು ಕೊಚ್ಚಿಹೋಗಿರುವ ಘಟನೆ ವಿಷಾದನೀಯ. ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆ ಸಂಭವಿಸಕೂಡದು. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಕಾಲು ಸಂಕ ಗುರುತಿಸಿ ನರೇಗಾ ಯೋಜನೆಯಡಿ ಸೇತುವೆ ರಚನೆಗೆ ಅದೇಶಿಸಿದ್ದೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ.

ಬುಧವಾರ ಕುಂದಾಪುರಕ್ಕೆ ಭೇಟಿ ನೀಡಿ ಮೀನುಗಾರಿಕೆ ಇಲಾಖಾಧಿಕಾರಿಗಳ ಸಭೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಬಂದರು, ಜೆಟ್ಟಿ ಸಹಿತ ಇನ್ನಿತರ ಅಭಿವೃದ್ಧಿಗಾಗಿ ಕೇಂದ್ರ 381 ಕೋಟಿ ರೂಪಾಯಿ ಅನುದಾನ ನೀಡಲು ಒಪ್ಪಿಗೆ ಸೂಚಿಸಿದೆ. 9 ಬೃಹತ್ ಯೋಜನೆಗಳಿಗೆ ಮಂಜೂರಾತಿ ನೀಡಿದೆ ಎಂದರು. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಇದ್ದರು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button