ಅಪಘಾತ

ಬೈಕ್‌ಗೆ ಕ್ಯಾಂಟರ್ ಡಿಕ್ಕಿ: ಸವಾರ ಸಾವು

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕೋಳಾಲ ಪೊಲೀಸ್ ಠಾಣೆ ಸರಹದ್ದಿನಲ್ಲಿಂದು ಬೆಳಿಗ್ಗೆ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿಯನ್ನು ತಾಲ್ಲೂಕಿನ ಕೋಳಾಲ ಹೋಬಳಿಯ ವೆಂಕಟಾಪುರ ಗ್ರಾಮದ ನಿವಾಸಿ ರಾಜಣ್ಣ (೪೨) ಎಂದು ಗುರುತಿಸಲಾಗಿದೆ.ಇವರು ಎಂದಿನಂತೆ ಮುಂಜಾನೆ ಡೇರಿಗೆ ಹಾಲು ಹಾಕಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಮಾರ್ಗಮಧ್ಯೆ ತಣ್ಣೇನಹಳ್ಳಿ ಬಳಿ ಅತಿ ವೇಗವಾಗಿ ಬಂದ ಕ್ಯಾಂಟರ್ ಬೈಕ್‌ಗೆ ಅಪ್ಪಳಿಸಿದ್ದರಿಂದ ಸವಾರ ರಾಜಣ್ಣ ಸ್ಥಳದಲ್ಲೇ ಅಸುನೀಗಿದ್ದಾರೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಕೋಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕೊರಟಗೆರೆ ಸರ್ಕಲ್ ಇನ್ಸ್‌ಪೆಕ್ಟರ್ ಸುರೇಶ್ ಹಾಗೂ ಕೋಳಾಲ ಪಿಎಸ್‌ಐ ಮಹಾಲಕ್ಷ್ಮಮ್ಮ ಭೇಟಿ ನೀಡಿ ಪರಿಶೀಲಿಸಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button