
ಮಥುರಾದಲ್ಲಿರುವ ಕೃಷ್ಣ ದೇಗುಲ ಸಮೀಕ್ಷೆಗೆ ಮಥುರಾ ಹೈಕೋರ್ಟ್ ಆದೇಶ ನೀಡಿದ್ದು, ಜ.20ರಂದು ಸರ್ವೆ ವರದಿ ಸಲ್ಲಿಸಲು ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ವರದಿಯನ್ನು ಹೈಕೋರ್ಟ್ಗೆ ಸಲ್ಲಿಸಿದೆ. ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿಯನ್ನು ಅತಿಕ್ರಮಿಸಿ ಮಸೀದಿ ನಿರ್ಮಿಸಲಾಗಿದೆ.
ಶಾಹಿ ಈದ್ಗಾ ಮಸೀದಿಯಲ್ಲಿ ಶುದ್ಧೀಕರಣ ವಿಧಿಗಳನ್ನು ನೆರವೇರಿಸಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಮಹಾಸಭಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.ಕೃಷ್ಣನ ಜನ್ಮಭೂಮಿಯ ಗರ್ಭಗೃಹದ ಮೇಲೆಯೇ ಮಸೀದಿಯನ್ನು ನಿರ್ಮಿಸಲಾಗಿದೆ.
ಮಸೀದಿಗೆ ಪ್ರವೇಶಿಸಿ ಅಭಿಷೇಕ ನಡೆಸಲು ಅವಕಾಶ ನೀಡಬೇಕು ಎಂದು ಹಿಂದೂ ಮಹಾಸಭಾಗದ ಖಜಾಂಚಿ ದಿನೇಶ್ ಶರ್ಮಾ ವಿನಂತಿಸಿದ್ದರು. ನ್ಯಾಯಲಯವು ಈ ಪ್ರಕರಣದ ತೀರ್ಪನ್ನು ಮೇ 31 ಮುಂದೂಡಿತ್ತು. ಈಗ ಮಥುರಾ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಮಥುರಾದಲ್ಲಿರುವ ಕೃಷ್ಣ ದೇಗುಲ ಸರ್ವೆ ಮಾಡಿ ವರದಿ ಸಲ್ಲಿಸುವಂತೆ ಆದೇಶವನ್ನು ನೀಡಿದೆ.ಶ್ರೀಕೃಷ್ಣ ದೇವಾಲಯಕ್ಕೆ ಸೇರಿದ್ದು ಎನ್ನುವ 13.37 ಎಕರೆ ಭೂಮಿಯನ್ನು ಸಂಪೂರ್ಣವಾಗಿ ಹಿಂದೂಗಳಿಗೆ ನೀಡಬೇಕು ಎನ್ನುವುದು ಹಿಂದೂ ಮಹಾಸಭಾದ ವಿನಂತಿ.
ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಿದ್ದ ಶಾಹಿ ಈದ್ಗಾ ಮಸೀದಿ ಸಮಿತಿಯ ಕಾರ್ಯದರ್ಶಿ ತನ್ವೀರ್ ಅಹ್ಮದ್, 1991ರ ಪೂಜಾ ಸ್ಥಳಗಳ ಕಾಯ್ದೆಯನ್ನು ಎಲ್ಲರೂ ಗೌರವಿಸಬೇಕು.
ಮಥುರಾದಲ್ಲಿ ಗೋಡೆಯ ಒಂದು ಬದಿಗೆ ಕೃಷ್ಣನ ಆಲಯವಿದ್ದರೆ, ಮತ್ತೊಂದು ಬದಿಗೆ ಮಸೀದಿಯಿದೆ. ಬಹುಕಾಲದಿಂದ ಇದು ಹೀಗೆಯೇ ನಡೆದುಕೊಂಡು ಬಂದಿದೆ. ಯಾರಿಗೂ ಇದರಿಂದ ಯಾವುದೇ ಸಮಸ್ಯೆ ಆಗಿರಲಿಲ್ಲ ಎಂದು ಹೇಳಿದ್ದರು.