ಅಪರಾಧ

ಮಹಿಳೆಯನ್ನು ಕೊಂದಿದ್ದಲ್ಲದೆ ಶವದ ಮೇಲೆಯೂ ಅಟ್ಟಹಾಸ ಮೆರೆದ ಆನೆ

Elephant Tramples Odisha Woman To Death

ಗಜರಾಜನ ಉಗ್ರ ಕೋಪಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ತಣ್ಣಗಾಗದ ಕೋಪ ಚಿತೆಯ ಮೇಲಿದ್ದ ಮಹಿಳೆಯ ಶವವನ್ನು ಎತ್ತಿ ನೆಲಕ್ಕೆ ಬಡಿದು ತುಳಿದು ಮತ್ತೆ ರಂಪಾಟ ಮಾಡಿರುವ ಘಟನೆ ಮಯೂರ್‍ಗಂಜ್ ಜಿಲ್ಲೆಯ ರಾಸಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಾಲ್ಮ ವನ್ಯಜೀವಿ ಅಭಯಾರಣ್ಯ ಬಳಿಯ ರಾಯ್ಪಾಲ್ ಗ್ರಾಮದ ನಿವಾಸಿ ಮಾಯ ಮುರ್ಮು ಎಂದಿನಂತೆ ಕೊಳವೆ ಬಾವಿಯಿಂದ ನೀರು ತರಲು ಹೋಗಿದ್ದರು. ಮಡಿಕೆಯಲ್ಲಿ ನೀರು ತುಂಬುತ್ತಿದ್ದಾಗ ಕಾಡಾನೆಯೊಂದು ಬಂದು ಆಕೆಯ ಮೇಲೆ ದಾಳಿ ಮಾಡಿದೆ. ಹಲವಾರು ಬಾರಿ ನೆಲಕ್ಕೆ ಬಡಿದು ಕಾಲುಗಳಿಂದ ತುಳಿದು ಹಾಕಿದೆ. ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮನೆಯವರು ಮತ್ತು ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸಂಜೆಯ ವೇಳೆಗೆ ಕುಟುಂಬದವರು ಮಾಯ ಅವರ ಅಂತಿಮ ವಿವಿಧಾನಗಳನ್ನು ನೆರವೇರಿಸಿ ಚಿತೆಯ ಮೇಲೆ ಪಾರ್ಥೀವ ಶರೀರವನ್ನು ಇಟ್ಟು ಅಂತ್ಯ ಸಂಸ್ಕಾರಕ್ಕೆ ಮುಂದಾದರು.

ಈ ಸಂದರ್ಭದಲ್ಲಿ ಅದೇ ಆನೆ ಏಕಾಏಕಿ ಅಲ್ಲಿಗೆ ಬಂದು ಚಿತೆಯ ಮೇಲಿದ್ದ ದೇಹವನ್ನು ಎತ್ತಿ ನೆಲಕ್ಕೆ ಎಸೆದು ಕಾಲಿನಿಂದ ತುಳಿದು ಹಾಕಿದೆ.ಅಂತಿಮವಾಗಿ ತನ್ನ ಕೋರೆಗಳಿಂದ ಶವವನ್ನು ಎತ್ತಿ ಪಕ್ಕಕ್ಕೆ ಎಸೆದು ಓಡಿಹೋಗಿದೆ. ಆನೆ ಹೋದ ನಂತರ ಗ್ರಾಮದ ಜನರು ಮೃತದೇಹವನ್ನು ಎತ್ತಿ ಚಿತೆಯ ಮೇಲಿಟ್ಟು ಅಂತಿಮ ವಿವಿಧಾನ ನೆರವೇರಿಸಿದರು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button