ರಾಜ್ಯ
ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ವಿಧಿವಶ: ಸಿದ್ದರಾಮನ ಹುಂಡಿಯಲ್ಲಿ ಶನಿವಾರ ಅಂತ್ಯಕ್ರಿಯೆ

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (70) ಅವರು ಶುಕ್ರವಾರ ನಿಧನರಾದರು.
ಅನಾರೋಗ್ಯ ಕಾರಣದಿಂದ ರಾಮೇಗೌಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶನಿವಾರ ನಡೆಯಲಿದೆ. ಸಿದ್ದರಾಮಯ್ಯ ಅವರು ತಮ್ಮನ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ರಾಮೇಗೌಡ ಅವರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ, ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಶನಿವಾರ ಮಧ್ಯಾಹ್ನ ವೇಳೆಗೆ ಸಿದ್ದರಾಮಯ್ಯನ ಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ರಾಮೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.