ರಾಜಕೀಯರಾಜ್ಯರಾಷ್ಟ್ರಿಯ

ಮೋದಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ, ಲೈಟರ್‌, ಬೆಂಕಿಪೊಟ್ಟಣ ನಿಷೇಧ: ಸಾರ್ವಜನಿಕರಿಗೆ ಕಟ್ಟಪ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಂಪೂರ್ಣ ಬಂದೋ ಬಸ್ತ್‌ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶುಕ್ರವಾರ ಮಂಗಳೂರಿನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಬರುವವರು ಲೈಟರ್‌, ಮ್ಯಾಚ್‌ಬಾಕ್ಸ್‌, ಭಿತ್ತಿಪತ್ರ, ಬಾಟಲಿ, ಕಪ್ಪು ಬಟ್ಟೆ ತರಬಾರದು ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಎಂಪಿಎ, ಸಾರ್ವಜನಿಕ ಸಭೆ, ಪಕ್ಷದ ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಬಂದೋಬಸ್ತ್‌ ಕ್ರಮಗಳ ಮೇಲ್ವಿಚಾರಣೆ ನಡೆಸಲು ಮಂಗಳೂರಿನಲ್ಲಿರುವ ಎಡಿಜಿಪಿ ಅಲೋಕ್‌ ಕುಮಾರ್‌, ಪೊಲೀಸರಿಗೆ ನಿರ್ದೇಶನ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ‘ಪ್ರಧಾನಿ ಆಗಮನ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗಿಯಾಗುವವರು ಕಪ್ಪು ಟಿ ಶರ್ಟ್‌ ಧರಿಸಬಾರದು.

ಅದನ್ನು ದುರುಪಯೋಗಪಡಿಸುವ ಸಾಧ್ಯತೆ ಇದೆ ಎಂದು ಈ ಮೂಲಕ ಸೂಚನೆ ನೀಡಲಾಗುತ್ತಿದೆ. ಹೆಲಿಪ್ಯಾಡ್‌ನಿಂದ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಅನುಕೂಲವಾಗುವಂತೆ ಕ್ರಮ ವಹಿಸಲಾಗಿದೆ. ತುರ್ತು ಮಾರ್ಗಗಳು ಸೇರಿದಂತೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಎಡಿಜಿಪಿ ತಿಳಿಸಿದರು.

ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ನೇತೃತ್ವದಲ್ಲಿ ಮಂಗಳೂರು ಪೊಲೀಸ್‌, ಹೊರ ಜಿಲ್ಲೆಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ, 13 ಕೆಎಸ್‌ಆರ್‌ಪಿ ಪ್ಲಟೂನ್‌, ಒಂದು ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‌ ಕಂಪನಿ)ಗರುಡ ಪಡೆ, ಎಎನ್‌ಎಫ್‌ ತಂಡವನ್ನು ತರಿಸಿದ್ದೇವೆ.

ನಗರದ ಮೂವರು ಡಿಸಿಪಿಗಳು, ಅಲ್ಲದೇ, ಹೊರ ಜಿಲ್ಲೆಗಳಿಂದ ಐದು ಮಂದಿ ಎಸ್ಪಿಗಳು, 15 ಮಂದಿ ಡಿವೈಎಸ್ಪಿಗಳು, 35 ಮಂದಿ ಇನ್‌ಸ್ಪೆಕ್ಟರ್‌ಗಳು, ಮೂರು ಸಾವಿರ ಸಿಬ್ಬಂದಿಯನ್ನು ಕರೆಸಲಾಗಿದೆ. ಜೊತೆಗೆ ಸಂಪೂರ್ಣ ಸಿಸಿಟಿವಿ ಕ್ಯಾಮೆರಾದ ಮೂಲಕ ಕಣ್ಗಾವಲು ಇರಿಸಲಾಗಿದೆ ಎಂದು ಅವರು ಹೇಳಿದರು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button