ಕ್ರೀಡೆ
ಲಕ್ಷ್ಯ ಸೇನ್ಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನಗದು ಬಹುಮಾನ : ಸಿಎಂ ಬೊಮ್ಮಾಯಿ ..

ಬೆಂಗಳೂರು :ಥಾಮಸ್ ಕಪ್ ಗೆದ್ದ ಕನ್ನಡಿಗ ಲಕ್ಷ್ಯ ಸೇನ್ಗೆ ರಾಜ್ಯ ಸರ್ಕಾರ 5 ಲಕ್ಷ ರೂ.
ನಗದು ಬಹುಮಾನ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ ಗಳನ್ನು ಬಹುಮಾನವನ್ನಾಗಿ ಘೋಷಿಸಿದೆ.
ಕಂಠೀರವ ಸ್ಟೇಡಿಯಂನಲ್ಲಿ ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಬಹುಮಾನ ಘೋಷಿಸಿದ್ದಾರೆ.