ಅಪರಾಧಪೊಲೀಸ್ಬೆಂಗಳೂರುರಾಜಕೀಯ

ಲೋಕಾಯುಕ್ತ ದಾಳಿ: ಆರೋಪಿ, ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಮಾಡಾಳ್ ಪ್ರಶಾಂತ್‌ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದ್ದು, ಬಿಜೆಪಿ ಶಾಸಕರಿಗೆ ಈಗ ಬಂಧನ ಭೀತಿ ಎದುರಾಗಿದೆ.

ಶ್ರೇಯಸ್ ಕಶ್ಯಪ್​ ಅವರು ನೀಡಿದ್ದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿದ್ದು, ಮಾಡಾಳ್ ವಿರೂಪಾಕ್ಷಪ್ಪ ಎ1(ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2(2ನೇ ಆರೋಪಿ), ಕೆಎಸ್​ಡಿಎಲ್​ ಅಕೌಂಟೆಂಟ್​ ಸುರೇಂದ್ರ ಎ3, ಮಾಡಾಳ್​ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾರೆ.

ತಮ್ಮ ವಿರುದ್ಧ ಎಫ್​ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರ ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ. ಚನ್ನೇಶಪುರ ಗ್ರಾಮದಲ್ಲಿರುವ ಶಾಸಕರ​ ನಿವಾಸ, ಮಾವಿನಹೊಳೆ ಬಳಿ ಇರುವ ಮಾಡಾಳ್ ಕುಟುಂಬದ ಕ್ರಷರ್ ಕಚೇರಿ, ಮಾವಿನಕಟ್ಟೆ ಗ್ರಾಮದ ಬಳಿ ಇರುವ ತೋಟದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, 20 ಮಂದಿಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button