
ಬಿಜೆಪಿ ಸೇರಲು ಮುಂದಾಗಿರುವ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ಕರೆದಿರುವ ಅವರು ತಮ್ಮ ರಾಜೀನಾಮೆಯನ್ನು ಪ್ರಕಟಿಸಲಿದ್ದು, ಬಳಿಕ ರಾಜೀನಾಮೆಪತ್ರವನ್ನು ರಾಜ್ಯಪಾಲ ತಾವರ್ಚಂದ್ ಗೆಲ್ಹೋಟ್ಗೆ ಸಲ್ಲಿಸಲಿದ್ದಾರೆ.
ಈಗಾಗಲೇ ವಿಧಾನಪರಿಷತ್ನ ಎರಡು ಶಿಕ್ಷಕರು ಮತ್ತು ಎರಡು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ಹೊರಟ್ಟಿ ಅವರು ಬಿಜೆಪಿಯವರು ಸ್ರ್ಪಧಿಸಲಿದ್ದಾರೆ.
ಮೂಲಗಳ ಪ್ರಕಾರ ಹೊರಟ್ಟಿ ಅವರು ಬುಧವಾರ ಮಲ್ಲೇಶ್ವರಂದಲ್ಲಿರುವ ಜಗನ್ನಾಥ ಭವನದಲ್ಲಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆದು ಕಮಲವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಈವರೆಗೂ ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ಹೊರಟ್ಟಿ ಅವರು ಸತತ 7 ಬಾರಿ ಗೆದ್ದು ದಾಖಲೆಯನ್ನೇ ನಿರ್ಮಿಸಿದ್ದಾರೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ಗೆ ಗುಡ್ಬೈ ಹೇಳಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಹಿರಿಯ ಮುಖಂಡ ಮೋಹನ್ ಲಿಂಬೆಕಾಯಿ ಕೂಡ ಕಣ್ಣಿಟ್ಟಿದ್ದಾರೆ.