ಅಪರಾಧರಾಜ್ಯ

ಶ್ರೀಮಂತ ಹುಡುಗಿಯರೇ ಈತನ ಟಾರ್ಗೆಟ್! ಕೇರಳ ಮೂಲದ ಆಸಾಮಿಯಿಂದ ಮೈಸೂರು ಮಹಿಳೆಗೆ ದೋಖಾ!!

ಮೈಸೂರು: ಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಚಾಲಾಕಿಯೊಬ್ಬನ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೋರ್ಸ್ ಆದವರು ಮತ್ತು 40 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಖದೀಮ ಹಲವಾರು ಮಹಿಳೆಯರಿಗೆ ವಂಚಿಸು ಎಸ್ಕೇಪ್ ಆಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈತನನ್ನು, ಕೇರಳ ಮೂಲದ ಸುನೀಶ್ ಪಿಳ್ಳೆ (33) ಎಂದು ಗುರುತಿಸಲಾಗಿದ್ದು, ಆತನ ವಿರುದ್ದ ಮೈಸೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ವಿಜಯ ನಗರ ನಿವಾಸಿ ಪ್ರೀತಿ ಸಿಂಗ್ ಎಂಬುವರು ಸುನೀಶ್ ಪಿಳ್ಳೆ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಐದು ವರ್ಷದ ಹಿಂದೆ ವಿವಾಹವಾದ ಜೋಡಿಗೆ ನಾಲ್ಕು ವರ್ಷದ ಹೆಣ್ಣು ಮಗುವಿದೆ.

ವಿವಾಹದ ಬಳಿಕ ಆಗಾಗ್ಗೆ ಹಣಕ್ಕಾಗಿ ಪೀಡಿಸುತ್ತಿದ್ದ ಸುನೀಶ್, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂ. ಪಡೆದಿದ್ದ.

ಆಗಾಗ್ಗೆ ಮನೆಗೆ ಬಂದು ಹಣಕ್ಕಾಗಿ ಪೀಡಿಸುತ್ತಿದ್ದ. ಈ ಬಗ್ಗೆ ಪ್ರೀತಿ ಸಿಂಗ್ ಅವರು, ಸುನೀಶ್ ಪಿಳ್ಳೆ ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಸಮಸ್ಯೆ ಬಗೆಹರಿಸುವುದಾಗಿ ಹೇಳಿ ಕೊನೆಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ತಪ್ಪಿಸಿಕೊಂಡಿದ್ದಾರೆ. ಈತ ಸೇರಿದಂತೆ ಕುಟುಂಬದ ನಾಲ್ವರ ವಿರುದ್ದ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಈತ ಮ್ಯಾಟ್ರಿಮೋನಿಯಲ್ಲಿ ಶ್ರೀಮಂತ ಉದ್ಯಮಿ ಎಂದು ಪ್ರೊಫೈಲ್ ಕ್ರಿಯೇಟ್ ಮಾಡಿಕೊಂಡು ಶ್ರೀಮಂತ ಮಹಿಳೆಯರನ್ನು ಪರಿಚಯಿಸಿಕೊಂಡು ಮದುವೆಯಾಗುತ್ತಿದ್ದ.

ಬಳಿಕ ಅವರೊಂದಿಗೆ ಕೆಲ ತಿಂಗಳ ಕಾಲ ಸಂಸಾರ ನಡೆಸಿ, ಉದ್ಯಮದಲ್ಲಿ ನಷ್ಟವಾಗಿದೆ ಎಂದು ಹಣ ಪಡೆದು ವಂಚಿಸಿ ಪರಾರಿಯಾಗುತ್ತಿದ್ದ. ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಪ್ರಕರಣಗಳು ದಾಖಲಾಗಿದೆ ಅಂತ ಹೇಳಲಾಗಿದೆ.

ಸುನೀಶ್ ಪಿಳ್ಳೈ ವಿರುದ್ದ ಕೇರಳದಲ್ಲಿ ಅಪಹರಣ ಪ್ರಕರಣ ಕೂಡ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ. ಈತನ ಪತ್ತೆಗೆ ಮೈಸೂರು ಸೇರಿದಂತೆ ಎಲ್ಲೆಡೆ ಶೋಧ ಕಾರ್ಯ ನಡೆಯುತ್ತಿದೆ.

ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವೈದ್ಯರು, ಸಾಫ್ಟ್‌ವೇರ್ ಎಂಜಿನಿಯರ್, ಶ್ರೀಮಂತ ವಿಚ್ಛೇದಿತ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ವಿವಾಹವಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ.

12 ಕ್ಕೂ ಹೆಚ್ಚು ಮಂದಿ ಮಹಿಳೆಯರನ್ನು ಈತ ವಂಚಿಸಿದ್ದಾನೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮದುವೆಯಾದ ಮೊದಲ 3 ವರ್ಷ ಎಲ್ಲವೂ ಚೆನ್ನಾಗಿತ್ತು . ಇಬ್ಬರು ಪರಸ್ಪರ ಹೊಂದಾಣಿಕೆಯಿಂದ ಜೀವನ ಸಾಗಿಸಿದ್ದರು . ಆದ್ರೆ ಕ್ರಮೇಣ ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿದ್ದನು.

ಬೇಸತ್ತಿದ್ದ ಪತ್ನಿ ಹಲವು ಬಾರಿ ಮನೆಯವರ ಗಮನಕ್ಕೆ ತಂದಿದ್ದಳು. ಆದರೆ, ಸಂಧಾನದ ಬಳಿಕವೂ ವರದಕ್ಷಿಣೆ ಕಿರುಕುಳ ಹೆಚ್ಚಾದ ಪರಿಣಾಮ ಸಾಕಷ್ಟು ನೊಂದಿದ್ದಳು. ಈಗ ಪತಿ ಸುನೀಶ್ ಎಸ್ಕೇಪ್ ಆಗಿದ್ದಾನೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button