ರಾಜ್ಯ

ಸಾಲುಮರದ ತಿಮ್ಮಕ್ಕ ಅವರಿಗೆ 50×80 ನಿವೇಶನದ ಕ್ರಯಪತ್ರ ಹಸ್ತಾಂತರಿಸಿದ ಸಿಎಂ

Salu maradha timmakka

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನದ ಕ್ರಯಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಸ್ತಾಂತರಿಸಿದರು.

ರೇಸ್‍ಕೋರ್ಸ್ ರಸ್ತೆಯ ನಿವಾಸಕ್ಕೆ ಸಾಲುಮರದ ತಿಮ್ಮಕ್ಕ ಅವರನ್ನು ಆಹ್ವಾನಿಸಿದ್ದ ಬೊಮ್ಮಾಯಿ ಅವರು, ಬಿಡಿಎ ನಿವೇಶನದ ಕ್ರಯಪತ್ರವನ್ನು ಅವರ ಸಾಕುಪುತ್ರ ಅವರ ಕೈಗೆ ಹಸ್ತಾಂತರ ಮಾಡಲಾಯಿತು.

ನಾಡಪ್ರಭು ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‍ನ ಜೆ ಸೆಕ್ಟರ್‍ನಲ್ಲಿ 50*80 ಚದರ ಅಡಿಯ ನಿವೇಶನವನ್ನು ಸಾಲುಮರದ ತಿಮ್ಮಕ್ಕನಿಗೆ ಕಳೆದ ಬುಧವಾರ ಬಿಡಿಎ ನಿವೇಶನವನ್ನು ಮಂಜೂರು ಮಾಡಲಾಗಿತ್ತು.

ಸಿಎಂ ಸೂಚನೆ ಮೇರೆಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಪರಿಸರ ಜಾಗೃತಿ ಮೂಡಿಸುತ್ತಿರುವ ಸಾಲುಮರದ ತಿಮ್ಮಕ್ಕನವರಿಗೆ ಅವರ ಕೋರಿಕೆಯಂತೆ ನಿವೇಶನವನ್ನು ಮಂಜೂರಾತಿ ಮಾಡಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ.

ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button