ಅಪರಾಧಪೊಲೀಸ್ರಾಜ್ಯ

ಸೋಷಿಯಲ್ ಮೀಡಿಯಾ ದಲ್ಲಿ ಕೆಟ್ಟದಾಗಿ ಕಾಮೆಂಟ್- ಯುವಕನ ಹತ್ಯೆ

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಿತಿನ್ ಮತ್ತು ಮನು ಸೇರಿ ಬೇರೇಶ್(23) ಎಂಬವನನ್ನು ಕೊಲೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಸರಸ್ವತಿ ಪ್ಲಾಜ್ ಬಳಿ ಘಟನೆ ನಡೆದಿದೆ. ಇನ್‍ಸ್ಟಾಗ್ರಾಮ್‍ನಲ್ಲಿ ನಿತಿನ್ ಬಗ್ಗೆ ಬೀರೇಶ್ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಆರೋಪ ಇದೀಗ ಕೇಳಿ ಬರುತ್ತಿದೆ. ಇದೇ ದ್ವೇಷಕ್ಕೆ ತಿರುಗಿ ನಿತಿನ್ ಹಾಗೂ ಮನು ಇಬ್ಬರು ಸೇರಿ ಬೀರೇಶ್‍ನನ್ನು ಚಾಕು ಇರಿದು ಹತ್ಯೆ ಮಾಡಿದ್ದಾರೆ.

ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ಬೀರೇಶ್‍ನನ್ನು ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೀರೇಶ್ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button